ಬಳ್ಳಾರಿ, ಡಿ. 26: ಜಿಲ್ಲೆ ಹೂವಿನಹಡಗಲಿ ತಾಲೂಕು ಮಿರಾಕೊರನ ಹಳ್ಳಿ, ಹಿರೇಕೊಳಚಿ ಗ್ರಾಮ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಗ್ರಾಮಸ್ಥರು ಊಟದ ತಟ್ಟೆಯಲ್ಲಿ ಒನಕೆ ನಿಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ನೀರು ತುಂಬಿದ ತಟ್ಟೆಯಲ್ಲಿ ಒನಕೆ ನಿಲ್ಲಿಸಿ ಗ್ರಹಣದ ಎಫೆಕ್ಟ್ ಎಂದು ಹೇಳುತ್ತಿದ್ದಾರೆ.
ಸುತ್ತಮುತ್ತಲಿನ ಗ್ರಾಮಸ್ಥರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದು, ಯಾವುದೇ ಆಸರೆ ಇಲ್ಲದೆ ಒನಕೆ ತಟ್ಟೆಯಲ್ಲಿ ನಿಲ್ಲುವುದಕ್ಕೆ ಹೇಗೆ ಸಾಧ್ಯ ಎಂದು ತಮ್ಮಲ್ಲೇ ಪ್ರಶ್ನೆ ಹಾಕಿಕೊಳ್ಳುತ್ತಿದ್ದಾರೆ.