ಇದೇ ಕೊನೆಯ ಚುನಾವಣೆ ಎಂದು ಬಿಜೆಪಿ ಅಭ್ಯರ್ಥಿ.!

ಇದೇ ಕೊನೆಯ ಚುನಾವಣೆ ಎಂದು ಬಿಜೆಪಿ ಅಭ್ಯರ್ಥಿ.!

ಬೆಂಗಳೂರು, ಏ. 25, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ಲೋಕಸಭಾ ಚುನಾವಣೆಯು ಮುಗಿದ ಮೇಲೆ ಸಾಕಷ್ಟು ಬದಲಾವಣೆಗಳು ಆಗಿವೆ.ಸಾಕಷ್ಟು ಅತೃಪ್ತ ಶಾಸಕರು ಪಕ್ಷಾಂತರಗೊಂಡಿದ್ದಾರೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಬಿಜೆಪಿ ಅಭ್ಯರ್ಥಿ, ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಜೊತೆ  ಮಾತನಾಡಿದ ಜಿಎಂ ಸಿದ್ದೇಶ್ವರ, ಅಭಿವೃದ್ಧಿ ಮಾಡುವುದೆ ಒಂದೇ ನನ್ನ ಗುರಿ. ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು, ಪರ್ಟಿಲೈಸರ್ ಫ್ಯಾಕ್ಟರಿ, ಸೆಕೆಂಡ್ ಜನರೇಷನ್ ಎಥೆನಾಲ್ ಘಟಕ ಸ್ಥಾಪನೆ, ದಾವಣಗೆರೆ ರೈಲ್ವೆ ನಿಲ್ದಾಣ ಅಭಿವೃದ್ಧಿ, 2 ರೈಲ್ವೇ ಗೇಟ್ ಗಳ ಸಮಸ್ಯೆಗೆ ಮುಕ್ತಿ, ಇಎಸ್ ಐ ಆಸ್ಪತ್ರೆ ಕಟ್ಟಡ ನಿರ್ಮಾಣ, ಜಿಲ್ಲಾಸ್ಪತ್ರೆಯಲ್ಲಿ 25 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ, 11 ಕೋಟಿ ವೆಚ್ಚದಲ್ಲಿ ಹಳೆ ಹೆರಿಗೆ ಆಸ್ಪತ್ರೆಯ ಅಭಿವೃದ್ಧಿ ನನ್ನ ಗುರಿಯಾಗಿವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಇದೇ ನನ್ನ ಕಡೇ ಚುನಾವಣೆಯೆಂದು ಘೋಷಿಸಿದ್ದೇನೆ. 2024ಕ್ಕೆ ರಾಜಕೀಯದಿಂದ ನಿವೃತ್ತಿ ಹೊಂದುವೆ ಎಂದು ಬಿಜೆಪಿ ಅಭ್ಯರ್ಥಿ, ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos