ಬಳ್ಳಾರಿ, ಅ. 28 : ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ
ಮೃತರನ್ನು ಬುಸ್ಸಿ (21), ದಾದಾ ಕಲಂದರ (31), ಅಸ್ಲಂ (25) ಮೃತ ದುರ್ವೈವಿಗಳು. ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಪರಶುರಾಮ (28) ಮತ್ತು ಮನ್ಸೂರ್ (30) ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ .
ಘಟನೆಗೆ ಸಂಬಂಧಿಸಿದಂತೆ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ