‘ಸಂಪುಟ ಸಂಕಟ’

‘ಸಂಪುಟ ಸಂಕಟ’

ಬೆಂಗಳೂರು, ಡಿ. 18: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಎಸ್‌ ಯಡಿಯೂರಪ್ಪ ಸರಕಾರದ ಸಂಪುಟ ವಿಸ್ತರಣೆ ತಲೆಧೋರುತ್ತಿರುವ ಗೊಂದಲ ಸಿಎಂ ಪಾಲಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ 24 ಗಂಟೆಯೊಳಗಾಗಿ ಸಚಿವ ಸ್ಥಾನ ನೀಡುತ್ತೇನೆ ಎಂದು ಸಿಎಂ ಭರವಸೆ ನೀಡಿದರೂ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ

ಇದರ ಬೆನ್ನಲ್ಲೇ ಸಿಎಂ ಬಿಎಸ್‌ವೈ ತಮ್ಮ ನಿಲುವನ್ನು ಬದಲಾಯಿಸಿದ್ದು ಗೆದ್ದವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದಿರುವುದು ಕುತೂಹಲ ಸೃಷ್ಟಿಸಿದೆ. ಒಂದು ವೇಳೆ ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬಿಎಸ್‌ವೈ ಅವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಗಳನ್ನು ಅಲ್ಲಗಳೆಯೋ ಹಾಗಿಲ್ಲ. ವಲಸೆ ಬಿಜೆಪಿಗರ ಜೊತೆಗೆ ಮೂಲಕ ಬಿಜೆಪಿಗರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದು ಮುಂದಿನ ದಿನಗಳಲ್ಲಿ ಬಿಕ್ಕಟ್ಟು ತೀವ್ರಗೊಳ್ಳುವ ಸೂಚನೆ ಗೋಚರಿಸುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos