ಸರ್ಕಾರ ಉಳಿಸಪ್ಪ ತಿಮ್ಮಪ್ಪ: ಸಚಿವ ರೇವಣ್ಣ

ಸರ್ಕಾರ ಉಳಿಸಪ್ಪ ತಿಮ್ಮಪ್ಪ: ಸಚಿವ ರೇವಣ್ಣ

ಬೆಂಗಳೂರು, ಜು. 11 : ಸಹೋದರನ ಸರ್ಕಾರ ಉಳಿಯಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಮಾಡಿ, ಸರ್ಕಾರ ಉಳಿಸಪ್ಪ ಎಂದು ಬೇಡಿಕೊಂಡಿದ್ದಾರಂತೆ. ಆರು ದಿನಗಳಿಂದ ಬರಿಗಾಲಲ್ಲೇ ಓಡಾಡುತ್ತಿರೋ ರೇವಣ್ಣ ಅವರಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬುಧವಾರ ತಿರುಪತಿಗೆ ಹೋಗುವ ಮುನ್ನ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗುತ್ತಿಗೆದಾರರಿಗೆ 1,500 ಕೋಟಿ ರೂ. ಬಿಲ್ ಚುಕ್ತಾ ಮಾಡಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆಯೇ ರೇವಣ್ಣ ಅವರು ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಶಾರದಾಂಬೆ ದೇವೇಗೌಡರ ಕುಟುಂಬದ ಇಷ್ಟದ ದೇವರಾಗಿದ್ದು, ಎರಡು ಬಾರಿ ಶೃಂಗೇರಿಗೆ ರೇವಣ್ಣ ಬಂದು ಪೂಜೆ ಸಲ್ಲಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos