ತುಮಕೂರಲ್ಲಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ..!

ತುಮಕೂರಲ್ಲಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ..!

ತುಮಕೂರು, ಮಾ.16, ನ್ಯೂಸ್ ಎಕ್ಸ್ ಪ್ರೆಸ್: ಡಿಸಿಎಂ ತವರು ಜಿಲ್ಲೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಜೆಡಿಎಸ್ ಕಣಕ್ಕೆ ಇಳಿಯಲಿದ್ದು, ಕಾಂಗ್ರೆಸ್ ಇಲ್ಲಿ ತಮ್ಮದೇ ಪಕ್ಷದ ಹಾಲಿ ಸಂಸದರು ಇದ್ದರು ಕೂಡ ಕ್ಷೇತ್ರವನ್ನು ತ್ಯಾಗ ಮಾಡಿದೆ.

ಈ ನಡುವೆ ಇಂದು ನಗರದ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ, ತುಮಕೂರಿನಲ್ಲಿ ದೇವೇಗೌಡರು ನಿಂತರೆ ಸೋಲಿಸುತ್ತೇವೆ. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಲೇಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಆಗ್ರಹಿಸಿದರು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು 44 ಜನ ಕಾಂಗ್ರೆಸ್ ನ ಸಂಸದರು ಗೆದ್ದಿದ್ದಾರೆ. ಅದರಲ್ಲಿ 43 ಮಂದಿಗೆ ಟಿಕೆಟ್ ಕೊಟ್ಟು ಮುದ್ದಹನುಮೇಗೌಡರಿಗೆ ತಪ್ಪಿಸುವುದು ಸರಿಯಲ್ಲ. ಅವರು ಹೆಚ್ಚು ಕ್ರಿಯಾಶೀಲರಾಗಿ ಸಂಸತ್ ನಲ್ಲಿ ಮಾತನಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಬೇರೆ ಜಿಲ್ಲೆಗಳಿಗೆ, ನಮ್ಮ ಜಿಲ್ಲೆಗೆ ಏನಿದ್ರೂ ಕಾಂಗ್ರೆಸ್ ಮಾತ್ರ. ಜೆಡಿಎಸ್ ಗೆ ಟಿಕೆಟ್ ನೀಡಿದ್ರೆ ನಾವೇ ಗೌಡರನ್ನು ಸೋಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಬೇಡ ಮುದ್ದಹನುಮೇ ಗೌಡರಿಗೆ ಟಿಕೆಟ್ ನೀಡಬೇಕು ಅಂತ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos