ಮೋದಿ ಮತ್ತೆ ಕರ್ನಾಟಕಕ್ಕೆ…!?

ಮೋದಿ ಮತ್ತೆ ಕರ್ನಾಟಕಕ್ಕೆ…!?

ರಾಯಚೂರು, ಜ. 5 : ಪ್ರಧಾನಿ ನರೇಂದ್ರ ಮೋದಿ ಅವರು ಇಪ್ಪತ್ತು ಸಾವಿರ ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ಪ್ರಮಾಣ ಪತ್ರ ನೀಡಲು ರಾಯಚೂರು ಜಿಲ್ಲೆಗೆ ಆಗಮಿಸಲಿದ್ದಾರೆ.ಕರ್ನಾಟಕದಿಂದಲೆ ಕ್ಯಾಬ್ ಜಾರಿಯಾಗುವುದು ಇದರಿಂದ ನಿಶ್ಚಯವಾದಂತಾಗಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಬಾಂಗ್ಲಾ ವಲಸಿಗರಿಗೆ, ಪೌರತ್ವ ಪ್ರಮಾಣ ಪತ್ರ ನೀಡಲು ವಿತರಣಾ ಸಮಾರಂಭಕ್ಕೆ ದಿನಾಂಕ ನಿಗದಿಮಾಡುವಂತೆ, ಕೊಪ್ಪಳ ಸಂಸದ ಸಂಗಣ್ಣ ಕರಡಿ , ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್ ಗೆ ಪತ್ರ ಬರೆದಿದ್ದಾರೆ.
ಸಿಂಧನೂರು ತಾಲೂಕಿನಲ್ಲಿರುವ ಆರ್ ಎಚ್ ಕ್ಯಾಂಪ್ 1 ರಿಂದ 5 ರಲ್ಲಿ ಸುಮಾರು 20 ಸಾವಿರ ಜನ ಪೌರತ್ವ ಪಡೆಯುವ ಫಲಾನುಭವಿಗಳು ಇದ್ದಾರೆ. ಆದ್ದರಿಂದ ಸಿಂಧನೂರಿನಲ್ಲಿ ಜನವರಿ 15, 2020ರೊಳಗೆ ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಸಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದಿನಾಂಕ ನಿಗದಿಪಡಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಅಂತ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಂಗಣ್ಣ ಕರಡಿ ಕೋರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos