ಬೆಂಗಳೂರು, ಡಿ. 2 : ಉಪಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ಪಕ್ಷದ ನಾಯಕರುಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಮಾಜಿ ಸಚಿವ ಎಂ.ಬಿ ಪಾಟೀಲ್ ಈ ತಿಂಗಳ ಅಂತ್ಯದೊಳಗೆ ಮತ್ತೆ ಭಾಗ್ಯಗಳ ಸರ್ಕಾರ ಬರಲಿದೆ, ಈಗಿನ ಸರ್ಕಾರ ಇದೆವೋ ಇಲ್ಲವೋ ಎನ್ನುವಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯವನರು ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಟ್ವೀಟ್ ಮಾಡಿ ಪರೋಕ್ಷವಾಗಿ ಎದುರಾಳಿ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.