ಸೂರತ್, ಆ. 30: ಸಾಮನ್ಯವಾಗಿ ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ ದಂಡ ಕಟ್ಟಿಸಿಕೊಳ್ಳುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಸೂರತ್ ನ ಪಾಲಿಕೆ ಅಧಿಕಾರಿಗಳು ಬಸ್ಕಿ ಹೊಡೆಸಿ ವಿನೂತನ ಶಿಕ್ಷೆ ನೀಡಿರುವುದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
ಸೂರತ್ ಲಾಲ್ ಬಂಗ್ಲೋದಲ್ಲಿ ಬೈಕಿನಲ್ಲಿ ಸವಾರಿ ಮಾಡುತ್ತಿದ್ದಾಗಲೇ ಆತ ರಸ್ತೆಯ ಮೇಲೆ ಪಾನ್ ಪರಾಗ್ ಉಗುಳಿದ್ದಾನೆ. ಇದನ್ನು ನೋಡಿದ ಮುನ್ಸಿಪಲ್ ಕಾರ್ಪೋರೇಷನ್ನ ಅಧಿಕಾರಿಗಳು ದಂಡ ಕಟ್ಟುವಂತೆ ಸೂಚಿಸಿದರು.
ಆದರೆ, ಆ ಯುವಕನ ಬಳಿ ಹಣವಿಲ್ಲದ ಕಾರಣ ಅಧಿಕಾರಿಗಳಿಗೆ ದಂಡ ಕಟ್ಟುವುದಿಲ್ಲ ಎಂದು ಅವಾಜ್ ಹಾಕಿದ್ದಾನೆ. ಇದರಿಂದ ಸಿಟ್ಟಾದ ಅಧಿಕಾರಿಗಳು ರಸ್ತೆಯಲ್ಲೇ ಬಸ್ಕಿ ಹೊಡೆಸಿ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಮುಂದೆ ಈ ರೀತಿಯ ತಪ್ಪು ಮಾಡಬಾರದೆಂದು ಯುವಕನಿಗೆ ಅಧಿಕಾರಿಗಳು ಎಚ್ಚರಿಕೆ ನಿಡಿದ್ದಾರೆ,ಅಧಿಕಾರಿಗಳು ಈ ರೀತಿ ಶಿಕ್ಷೆ ಕೊಟ್ಟಿರುವುದಕ್ಕೆ ಸಾರ್ವಜನಿಕರು ಈ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.