ಶೃಂಗೇರಿ, ಸೆ. 12: ರಾಜ್ಯದಲ್ಲಿ ಕೆಲವು ದಿನಗಳಿಂದ ದಾರಕಾರ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಜನ ಜೀವನ ತತ್ತರಿಸಿದೆ. ಹೌದು, ಈ ಹಿಂದೆ ನಾವು ಮಳೆ ಬರುವುದಕ್ಕೆ ಪೂಜೆ ಸಲ್ಲಿಸುತ್ತಿದ್ದೇವು ಆದರೆ ಈಗ ನಾವು ಇಂದು ಮಳೆ ನಿಲ್ಲುವುದಕ್ಕೆ ವಿಶೇಷ ಪೂಜೆ ಸಲ್ಲಿಸುವುದಕ್ಕೆ ವಿಶೇಷ ಪೂಜೆ ಸಲ್ಲಿಸಲು ಶೃಂಗೇರಿ ಬಂದಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಅವರು ಇಂದು ಇಂದು ಶೃಂಗೇರಿಗೆ ತೆರಳಲು ಮೆಣಸೆ ಹೆಲಿಪ್ಯಾಡ್ ಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು.