ನವದೆಹಲಿ, ಮೇ. 31, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಹೌದು, 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನರೇಂದ್ರ ಮೋದಿ ಅವರು ಇಂದು ಸಂಜೆ ಸಂಪುಟಸಭೆ ಕರೆದಿದ್ದು, ಸಚಿವರಿಗೆ ಖಾತೆ ಹಂಚಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕದ 4 ಜನರಿಗೆ ಸಂಸದರೂ ಸೇರಿದಂತೆ ಒಟ್ಟು 57 ಜನರು ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.