ಬೆಂಗಳೂರು, ಜೂ. 21: ಇಂದು ಬೆಂಗಳೂರು ಸೇರಿದಂತೆ ಎಸಿಬಿ ಅಧಿಕಾರಿಗಳು ರಾಜ್ಯದ ಹಲವಡೆ ಬೆಳ್ಳಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಬೆಂಗಳೂರಿನ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾಗಿರುವ ನಾರಾಯಣಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ನಾರಾಯಣಸ್ವಾಮಿಯ ಮಾವನ ಮನೆ, ಕೋಲಾರದ ಅಂತರಗಂಗೆ ರಸ್ತೆ ಬಳಿ ಇರುವ ಮನೆ, ಚಿಂತಾಮಣಿಯ ಮಾದರಕಲ್ಲು ಸ್ವಗ್ರಾಮದ ನಿವಾಸ, ಬೆಂಗಳೂರು ಜಯನಗರ ಮನೆ ಹಾಗೂ ಶಾಂತಿನಗರ ಕಚೇರಿ ಸೇರಿದಂತೆ ಎಲ್ಲಾ ಕಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದ್ದು, ಎಸಿಬಿ ಅಧಿಕಾರಿಗಳು ದಾಖಲೆ ಪತ್ರಗಳು ಸೇರಿದಂತೆ ಆಸ್ತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.