ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಿಲಿಕಾನ್ ಸಿಟಿ ಬೆಂಗಳೂರು ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಾಂಗ್ರೇಸ್ ಪಕ್ಷ ಸಭ್ಯಚಾರ ಪಾಲನೆ ಮಾಡಿಲ್ಲ ಎಂಬ ಬಿಜೆಪಿ ನಾಯಕ ಆರ್. ಅಶೋಕ ಮಾಡಿರುವ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಕ್ಷ್ಮವಾಗಿ ತಿರುಗೇಟು ನೀಡಿದ್ದಾರೆ.
ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರಿಗೆ ಎಷ್ಟು ಗೌರವ ಕೋಡಬೇಕೆಂದು ನಮಗೆ ಗೊತ್ತಿದೆ ನಾವು ರಾಜಕೀಯ ಪಾಠ ಯಾರಿಂದಲೂ ಕಲಿಯಬೇಕಿಲ್ಲ ಎಂದರು. ರಾಜಕೀಯ ಪ್ರಜ್ಞೆ ಮತ್ತು ಸಮಯ ಪ್ರಜ್ಞೆ ನಮಗೆ ಎಲ್ಲವೂ ಇದೆ. ಆದರೆ ಅಶೋಕ್ ಅವರಿಗೆ ಸ್ವಲ್ಪ ಏನೋ ಸಮಸ್ಯೆ ಇದ್ದಂತಿದೆ ಎಂದು ಹೇಳಿದರು.
ಬಿಜೆಪಿ ಶಾಸಕ ಆರ್ ಅಶೋಕಗೆ ಸ್ವಲ್ಪ ಪ್ರಾಬ್ಲಂ. ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿಯವರ ಸ್ವಾಗತಕ್ಕೆ ಬರುವುದು ಬೇಡ ಎಂದು ಕೇಂದ್ರ ಸರ್ಕಾರವೇ ನಮಗೆ ಹೇಳಿತ್ತು. ಹಾಗಾಗಿ ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಅವರ ಸ್ವಾಗತ ಮಾಡಿಸಿದ್ದೇವೆ. ಯಾರಿಗೆ ಎಷ್ಟು ಗೌರವ ಕೋಡಬೇಕು ಅಂತಾ ನಮಗೆ ಗೊತ್ತಿದೆ. ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತೇವೆ ಅದು ನಮ್ಮ ಕರ್ತ್ಯವ್ಯ ಎಂದು ಅವರು ಹೇಳಿದರು.
ವರದಿಗಾರ
ಎ.ಚಿದಾನಂದ,ವಿಜಯನಗರ.