ಬೆಳಗಾವಿ, ಸೆ. 25: ರಾಜ್ಯದಲ್ಲಿ ಜೆಡಿಎಸ್ ಕಟ್ಟಿ ಬೆಳೆಸಿದ್ದೇ ನಾವು, ಎಚ್.ಡಿ.ಕುಮಾರಸ್ವಾಮಿ ಅಲ್ಲ ಅಂತ ಎಚ್.ಡಿ.ಕೆ ಹೇಳಿಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ.
ಒಂದು ಪಕ್ಷ ಕಟ್ಟಿನೋಡಲಿ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಪಾಪ ಅವರು ಹೇಳುವುದರಲ್ಲಿ ಸತ್ಯವಿದೆ ಅಂತ ಅವರು ಎಚ್.ಡಿ.ಕೆ ಕಾಲೆಳೆದರು. ಇನ್ನು ನಾನು ಪಕ್ಷ ಕಟ್ಟಿಯೇ ಬೆಳೆದಿದ್ದು. ಜೆಡಿಎಸ್ ಗೆ ಆಮೇಲೆ ಬಂದ ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿ, ಮಂತ್ರಿಯಾಗಿದ್ದು ಎಂದು ಕಿಡಿಕಾರಿದರು.