ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತರಬೇತಿ ಕಾರ್ಯಕ್ರಮ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತರಬೇತಿ ಕಾರ್ಯಕ್ರಮ

ಬೆಂಗಳೂರು: ನಗರದಲ್ಲಿ‌ ಬರುವ ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟು ಮತದಾರರಿದ್ದಾರೆ ಎಂಬ ಮಾಹಿತಿ ನಿಮ್ಮ ಬಳಿ‌ ಲಭ್ಯವಿರಲಿದ್ದು, ಅದರನುಸಾರ ಮನೆ-ಮನೆ ಭೇಟಿ ನೀಡಿ ಹೆಚ್ಚು ಮತದಾನ ಮಾಡಲು ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು BEOಗಳಿಗೆ ತಿಳಿಸಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರದಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗುತ್ತಿದ್ದು, ಮತದಾನವನ್ನು ಹೆಚ್ಚಿಸುವ ಸಲುವಾಗಿ ಹಾಗೂ ನಗರದಲ್ಲಿ ವಾಸಿಸುವ ಜನರಿಗೆ ಮತದಾನ ಚಲಾಯಿಸಲು ಅಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಲವಾರು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿ ತಪ್ಪದೆ ಮತದಾನ ಮಾಡಲು ಮನವಿ ಮಾಡಬೇಕೆಂದು ಹೇಳಿದರು.

ಪ್ರಜಾಪ್ರಭುತ್ವಕ್ಕೆ ಎಲ್ಲರೂ ಮೊದಲ ಪ್ರಾಮುಖ್ಯತೆ ನೀಡಬೇಕು. ಒಂದೊಂದು ಮತಕ್ಕೂ ಸಮಾಜವನ್ನು ಬದಲಾಯಿಸುವ ಶಕ್ತಿಯಿದ್ದು, ಎಲ್ಲರೂ ಪ್ರತಿಯೊಂದು ಮತದ ಮಹತ್ವವನ್ನು ಅರಿತು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಮತದಾನ ಮಾಡುವಂತಾಗಬೇಕೆಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos