ರಾಯಚೂರು, ಅ.28 : ಚಿಕಿತ್ಸೆ ನೀಡುವ ಮೂಲಕ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೃದಯಾಘಾತಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ.ಮಡಿವಾಳಪ್ಪ ಎಂಬುವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ರಿಮ್ಸ್ ಆಸ್ಪತ್ರೆಗೆ ಬಂದ ಶಾಸಕ ಶಿವರಾಜ್ ಪಾಟೀಲ್, ಅಲ್ಲಿನ ವೈದ್ಯರು ಮತ್ತು ನರ್ಸ್ಗಳನ್ನು ಕರೆದು ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದಾರೆ.