ಮರದ ಕೊಂಬೆ ಬಿದ್ದು ವಿದ್ಯಾರ್ಥಿ ಸಾವು

ಮರದ ಕೊಂಬೆ ಬಿದ್ದು ವಿದ್ಯಾರ್ಥಿ ಸಾವು

ತುಮಕೂರು, ನ. 28 : ಸಿದ್ದಗಂಗಾ ಮಠದ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಮೃತಪಟ್ಟಿದ್ದಾನೆ. ನಿಂಗೇಶ(14) ಮೃತಪಟ್ಟ ವಿದ್ಯಾರ್ಥಿ. ಬಳ್ಳಾರಿ ಜಿಲ್ಲೆಯ ಮೋಕಾ ಗ್ರಾಮದ ನಿವಾಸಿ ಮಲ್ಲೇಶ್ವರ ಎಂಬುವರ ಮಗನಾದ ನಿಂಗೇಶ ಸೇರಿ ನೃತ್ಯ ಕಲಿಯಲೆಂದು ಹೋಗಿದ್ದ ವಿದ್ಯಾರ್ಥಿಗಳು ರಾತ್ರಿ ಮರದ ಕೆಳಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದಿದೆ. ಮರದಡಿ ಸಿಲುಕಿದ್ದ ನಿಂಗೆಶ್ ತಲೆಗೆ ತೀವ್ರ ಪೆಟ್ಟಾಗಿದೆ.

ತಕ್ಷಣ ಈತನನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಅಭಿಲಾಶ್ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಳೆದೆರಡು ವರ್ಷಗಳಿಂದ ನಿಂಗೇಶ್ ಈ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಈತನ ನಿಧನಕ್ಕೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ತೀವ್ರ ವಿಷಾದ ವ್ಯಕ್ತಪಡಿಸಿ ಮೃತನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos