ಕ್ಷುಲಕ ಕಾರಣಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

ಕ್ಷುಲಕ ಕಾರಣಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

ಬೆಂಗಳೂರು, ಜ. 1 : ಮಹಾನಗರ ಪಾಲಿಕೆ ಹಿರಿಯ ಅಧಿಕಾರಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಪೌರಕಾರ್ಮಿಕರ ಹಾಜರಾತಿ, ಸರಿಯಾದ ಪೌರಕಾರ್ಮಿಕರ ಸಂಖ್ಯೆ ಮಾಹಿತಿ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದೆ ಆರೋಪ ಕೇಳಿ ಬಂದಿದೆ.
ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಹಲಸೂರು ವಾರ್ಡ್ ಗೆ ಭೇಟಿ ನೀಡಿದ ವೇಳೆ ಅಲ್ಲಿನ ಸಹಾಯಕ ಹೆಲ್ತ್ ಇನ್ಸ್ಪೆಕ್ಟರ್ ಸಂಜಯ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರೊ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos