ಬೆಂಗಳೂರು: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಆದ ಬಾಂಬ್ ಬ್ಲಾಸ್ಟ್ ನಿಂದ ಇಡೀ ಸಿಲಿಕಾನ್ ಸಿಟಿ ಮಂದಿಯೇ ಬೆಚ್ಚಿಬಿದ್ದಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಎನ್ಐಎ ತನಿಕೆಗೆ ವರ್ಗಾಯಿಸಲಾಗಿದೆ.
ಬೆಂಗಳೂರಿನಲ್ಲಿ ನಡೆದ ಸ್ಪೋಟಕ್ಕೆ ಸಂಬಂಧಿಸಿ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಉತ್ತರಿಸಿದ ಅವರು, ಬಿಜೆಪಿಯವರಿಗೇನು ನಾವು ರಾಜೀನಾಮೆ ಕೊಡಬೇಕಾ? ಅವರಿಗೇನು ರಾಜೀನಾಮೆ ಬೇಕೋ ಕಳಿಸ್ತೀವಿ ತೆಗೆದುಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯವರು ಕೇವಲ ರಾಜಕೀಯ ಮಾಡ್ತಿದ್ದಾರೆ ಅಷ್ಟೇ. ಕರ್ನಾಟಕದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಬೆಂಗಳೂರಿನ ಇಮೇಜ್ಗೆ ಧಕ್ಕೆ ತರುತ್ತಿದ್ದಾರೆ ಎಂದರು.
ಅವರ ಅವಧಿಯಲ್ಲಿ ಕರ್ನಾಟಕದಲ್ಲಿ ಏನೆಲ್ಲಾ ಆಯ್ತು ಎಂಬುದನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ವಿಚಾರವಾಗಿ ರಾಜಕೀಯ ಮಾಡಲು ನನಗೆ ಇಚ್ಛೆ ಇಲ್ಲ. ಈ ಸಮಯದಲ್ಲಿ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿ ಬಗ್ಗೆ ಅರಿವಿರಬೇಕು ಎಂದು ಡು.ಕೆ. ಶಿವಕುಮಾರ್ ಹೇಳಿದರು ಹೇಳಿದರು.
ನೋವನ್ನುಂಟು ಮಾಡುತ್ತಿದ್ದು, ತಮ್ಮ ಗೌರವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದ ಡಿಕೆ ಶಿವಕುಮಾರ್, ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವು ಇಲ್ಲದವರು ಈ ರೀತಿ ಮಾತನಾಡುತ್ತಾರೆ ಎನ್ನುವ ಮೂಲಕ ಇದು ಬ್ರಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಎಂಬ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.