ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆ ಸಿಸಿ. ಲೈನಿಂಗ್ ಹಾಗೂ ಆಧುನಿಕರಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗಂಗಾವತಿ ತಾಲ್ಲೂಕಿನ ದಾಸನಾಳ ಸೇತುವೆ ಹತ್ತಿರ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ೬೩ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರ, ತುಂಗಭದ್ರಾ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ಜಿ.ಪಂ., ತಾ.ಪಂ. ಸದಸ್ಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.