ತುಮಕೂರು: ಮುದ್ದಹನುಮೇಗೌಡರ ಒಂದು ನಾಮಪತ್ರ ತಿರಸ್ಕೃತ

ತುಮಕೂರು: ಮುದ್ದಹನುಮೇಗೌಡರ ಒಂದು ನಾಮಪತ್ರ ತಿರಸ್ಕೃತ

ತುಮಕೂರು, ಮಾ, 28, ನ್ಯೂಸ್ ಎಕ್ಸ್ ಪ್ರೆಸ್: ಎಸ್.ಪಿ.ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ, ಪಕ್ಷೇತರ ಅಭ್ಯರ್ಥಿಯಾಗಿ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್ ಬಿಫಾರಂ ಇಲ್ಲದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರಾ? ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಎಸ್.ಪಿ.ಮುದ್ದಹನುಮೇಗೌಡ ಅವರ ಮನವೊಲಿಸಲು ಪ್ರಯತ್ನವನ್ನು ನಡೆಸುತ್ತಿದ್ದಾರೆ. ನಾಮಪತ್ರವನ್ನು ವಾಪಸ್ ಪಡೆಯಲು ಮಾ.29 ಕೊನೆಯ ದಿನವಾಗಿದೆ. ಮುದ್ದಹನುಮೇಗೌಡ ಅವರು ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆಯೇ? ಎಂದು ಕಾದು ನೋಡಬೇಕು.

ಫ್ರೆಶ್ ನ್ಯೂಸ್

Latest Posts

Featured Videos