ತುಂಗಭದ್ರ ಜಲಾಶಯದಿಂದ ಭಾರೀ ಪ್ರಮಾಣದ ನೀರು

ತುಂಗಭದ್ರ ಜಲಾಶಯದಿಂದ ಭಾರೀ ಪ್ರಮಾಣದ ನೀರು

ಕೊಪ್ಪಳ, ಆ. 11 : ತುಂಗಾ ಭದ್ರಾ ಜಲಾಶಯದಿಂದ ನದಿಗೆ 1.30 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ನವವೃಂದಾವನ ಗಡ್ಡೆಯಲ್ಲಿ ಇಬ್ಬರು ಕಾವಲುಗಾರರು ಸಿಲುಕಿ ಹಾಕಿಕೊಂಡಿದ್ದಾರೆ.
ತುಂಗಾಭದ್ರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ ನವವೃಂದಾವನ ಉಡಚಪ್ಪ, ರಾಘವೇಂದ್ರ ಸಿಲುಕಿಕೊಂಡಿದ್ದಾರೆ. ವಿರುಪಾಪುರ ಗಡ್ಡೆಯಲ್ಲಿ ಸುಮಾರು 200 ಪ್ರಯಾಣಿಕರು ಸಿಲುಕಿದ್ದಾರೆ.
ಗಂಗಾವತಿ ಕಂಪ್ಲಿ ರಸ್ತೆ ಕೂಡ ಕಡಿತಗೊಂಡಿದೆ. ನೀರು ಸೇತುವೆ ಮೇಲೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದ ಸಂಚಾರ ಬಂದ್ ಮಾಡಲಾಗಿತ್ತು. ಪ್ರಯಾಣಿಕರು ಪರದಾಡುತ್ತಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos