ವಿಜಯಪುರ: ಇತ್ತೀಚಿನ ದಿನಗಳಲ್ಲಿ ಅಪಘಾತ ಹೆಚ್ಚುತ್ತಾ ಇದೆ. ಮೆಹಬೂಬ್ ಮತ್ತು ಹುಸೇನ್ ಬೈಕ್ ಮೂಲಕ ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.