ಬೆಳಗಾವಿಯಲ್ಲಿ ಡಬಲ್ ಮರ್ಡರ್ !

ಬೆಳಗಾವಿಯಲ್ಲಿ ಡಬಲ್ ಮರ್ಡರ್ !

ಬೆಳಗಾವಿ, ಮೇ. 15, ನ್ಯೂಸ್ ಎಕ್ಸ್ ಪ್ರೆಸ್: ದುಷ್ಕರ್ಮಿಗಳು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಹೊರವಲಯದಲ್ಲಿ ನಡೆದಿದೆ.

ಶಿವಾ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲಿಂಗದಳ್ಳಿ ಗ್ರಾಮದ ಮಂಜುನಾಥ ಪಟ್ಟಣಶೇಟ್ಟಿ (30) ತಿಗಡೊಳ್ಳಿ ಗ್ರಾಮದ ಮುಸ್ತಾಕ ಬೀಡಿ (32) ಮೃತ ದುರ್ದೈವಿಗಳು. ಇವರಿಬ್ಬರೂ ರಾತ್ರಿ  ಪೆಟ್ರೋಲ್ ಬಂಕ್ ನಲ್ಲಿ ಮಲಗಿರುವ ಹಿನ್ನಲೆಯಲ್ಲಿ  ತಡರಾತ್ರಿ ಪೆಟ್ರೋಲ್ ಬಂಕ್ ಗೆ ದೀಡಿರ್ ನೇ ಆಗಮಿಸಿದ ದುಷ್ಕರ್ಮಿಗಳು ಇಬ್ಬರನ್ನೂ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಕೊಲೆಗೆ ಕಾರಣ ಹಾಗೂ ಆರೋಪಿಗಳು ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಕೂಡಲೇ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos