ಉತ್ತರ ಕನ್ನಡ : ಉ.ಕ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಹಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆರಾಯ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಗಂಗಾವಳಿ ನದಿಯು ಮೈದುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿಯಲ್ಲಿ ಸಮುದ್ರ ಮತ್ತು ನದಿಪಾತ್ರದ ಜನರು ಇದ್ದಾರೆ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.