ಉದೀತ್ ರಾಜ್ ಕಾಂಗ್ರೆಸ್ ಸೇರ್ಪಡೆ

ಉದೀತ್ ರಾಜ್ ಕಾಂಗ್ರೆಸ್ ಸೇರ್ಪಡೆ

ನವದೆಹಲಿ, ಏ. 24, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭೆ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಸಂಸದ ಉದೀತ್ ರಾಜ್ ಇಂದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿರುವ ಅವರು, ರಾಹುಲ್ ಜೊತೆ ಇರುವ ಭಾವಚಿತ್ರವನ್ನು ಟ್ವಿಟರ್ನಲ್ಲಿ ಬಹಿರಂಗಪಡಿಸಿದ್ದಾರೆ.

ನಾನು ರಾಷ್ಟ್ರೀಯ ಅಧ್ಯಕ್ಷರ ಜೊತೆ ಇದ್ದೇನೆ. ಅಧಿಕೃತವಾಗಿ ಕಾಂಗ್ರೆಸ್ ಗೆ  ಸೇರ್ಪಡೆಯಾಗಲಿದ್ದೇನೆ. ಯಾವಾಗಲು ಬಿಜೆಪಿಯ ಸಿದ್ದಾಂತಗಳನ್ನು ವಿರೋಧಿಸುತ್ತಿದ್ದೆ ಎಂದು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos