ಕೂಡ್ಲಿಗಿ, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಈ ಚುನಾವಣೆಯಲ್ಲಿ ಜನರು ಬಿಜೆಪಿ ವಿರುದ್ಧ ಮತ ನೀಡುವುದರೊಂದಿಗೆ ಮೋದಿ ಮೇಲೆ ದಾಳಿ ಮಾಡಲಿದ್ದು, ಬಿಜೆಪಿ ಹಾಗೂ ಮೋದಿ ತರಗಲೆಗಳಂತೆ ಉದುರಿ ಹೋಗಲಿದ್ದಾರೆ ಎಂದು ಬಳ್ಳಾರಿ ಲೋಕಸಭಾ ಚುನಾವಣಾ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಾರೆ. ಇದನ್ನು ತಪ್ಪಿಸಲು ಜೆಡಿಎಸ್ ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.