ಅನಂತ್‌ ಕುಮಾರ್‌ ಪಂಚಭೂತಗಳಲ್ಲಿ ಲೀನ;ಪತ್ನಿ , ಪುತ್ರಿಯರ ಕಣ್ಣೀರು

  • In State
  • November 14, 2018
  • 198 Views
ಅನಂತ್‌ ಕುಮಾರ್‌ ಪಂಚಭೂತಗಳಲ್ಲಿ ಲೀನ;ಪತ್ನಿ , ಪುತ್ರಿಯರ ಕಣ್ಣೀರು

ಬೆಂಗಳೂರು: ಸೋಮವಾರ ವಿಧಿವಶರಾದ ಬಿಜೆಪಿಯ ದಿಗ್ಗಜ ನಾಯಕ,ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ ಕುಮಾರ್‌ ಅವರ ಅಂತಿಮ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗಣ್ಯಾತೀಗಣ್ಯರ ಸಮಕ್ಷಮ, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.ಈ ವೇಳೆ ಪತ್ನಿ ತೇಜಸ್ವಿನಿ ಮತ್ತು ಪುತ್ರಿಯರಿಬ್ಬರು ತೀವ್ರ ಕಂಬನಿ ಮಿಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ ಅನಂತಕುಮಾರ್‌ ಅವರಿಗೆ ಅಂತಿಮ ನಮನ ಸಲ್ಲಿಸಿದರು.ಈ ವೇಳೆ ಕೇಂದ್ರ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos