ಉ.ಚು ಬಳಿಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದು

ಉ.ಚು ಬಳಿಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದು

ಕಲಬುರಗಿ, ಸೆ. 30: ಉಪಚುನಾವಣೆ ನಡೆದ ಬಳಿಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಗೊಂಡ-ಕುರುಬ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ನೆನ್ನೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದರು.

ಬಿಜೆಪಿಯವರು ಏನೇ ಮಾಡಿದರು ಉಪಚುನಾವಣೆಯ ನಂತರ ಬಿಜೆಪಿ ಸರ್ಕಾರ ಪತನವಾಗಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರದಿಂದ ದೂರವಿಡಲಿದೆ ಅಂತ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos