ತುಮಕೂರು, ಫೆ. 18: ಪ್ರವಾದಿ ಮಹಮ್ಮದ್ರ ಬಗ್ಗೆ ಪ್ರಚೋದನಾತ್ಮಕವಾಗಿ ಫೇಸ್ಬುಕ್ನಲ್ಲಿ ಹೇಳಿಕೆ ನೀಡುತ್ತಿರುವ ರೌಡಿಶೀಟರ್ ಅತುಲ್ ಸಬರವಾಲ್ ಅಲಿಯಾಸ್ ಮಧುಗಿರಿ ಮೋದಿ ಎಂಬಾತನ ಫೇಸ್ ಅಕೌಂಟ್ ಕುರಿತು ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ಗೆ ಪತ್ರ ಬರೆದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.
ಫಫೇಸ್ಬುಕ್ ಮೂಲಕ ಹೇಳಿಕೆಗಳನ್ನು ಅಪ್ಲೋಡ್ ಮಾಡುವ ಮೂಲಕ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುವ ಸಾಧ್ಯತೆಯಿದೆ ಎಂದು ಪತ್ರ ಬರೆಯಲಾಗಿದೆ. ಮೂರರಿಂದ ನಾಲ್ಕು ದಿನಗಳ ನಂತರ ಫೇಸ್ಬುಕ್ನಿಂದ ಉತ್ತರ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಧರ್ಮಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿರುವ ಕುರಿತು ವಿಡಿಯೋ ವೈರಲ್ ಆಗಿರುವುದು ಕಂಡುಬಂದ ತಕ್ಷಣ ಮಧುಗಿರಿ ಮೋಧಿ ಪತ್ತೆಗೆ ತಂಡ ರಚಿಸಲಾಗಿದೆ ಎಂದರು.
ಮಧುಗಿರಿ ಪೊಲೀಸ್ ಠಾಣೆಯಲ್ಲಿ 153ಎ, 295ಎ,67 ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ಈ ಬಗ್ಗೆ ಶಿರಾ, ತುಮಕೂರು ನಗರ, ಮಧುಗಿರಿ ಸೇರಿದಂತೆ ಮೂರು ಕಡೆ ಧರ್ಮ ಗುರುಗಳು ದೂರು ನೀಡಿದ್ದಾರೆ ಎಂದರು.
ಒAದು ಧರ್ಮದ ಗುರುಗಳು ಮತ್ತು ಮುಖಂಡರು ಇದರಿಂದ ಪ್ರಚೋದನೆಗೆ ಒಳಗಾಗಬಾರದು. ವೈಯಕ್ತಿಯವಾಗಿ ನಿಂದಿಸಿರುವುದರಿAದ ನಾವು ಶಿಸ್ತು ಕ್ರಮ ತೆಗೆದುಕೊಳ್ಳತ್ತೇವೆ. ಶಾಂತಿ ಕಾಪಾಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದ ಹಿನ್ನೆಲೆಯಲ್ಲಿ ಈ ಹಿಂದೆ ಜಯನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ ೧೫೩ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ. ಮಧುಗಿರಿ ಮೋಧಿಯನ್ನು ರೌಡಿಶೀಟರ್ ಆಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.