“ವಾಣಿಜ ನಗರಿ ಈಗ ಉಗ್ರರ ತಾಣ’’ : ಸಚಿವ ಸಿಟಿ ರವಿ

“ವಾಣಿಜ ನಗರಿ ಈಗ ಉಗ್ರರ ತಾಣ’’ : ಸಚಿವ ಸಿಟಿ ರವಿ

ಹುಬ್ಬಳ್ಳಿ,ಅ. 23 : ಭಯೋತ್ಪಾದಕರ ಅಡಗುತಾಣಗಳಾಗಿ ಅವರ ಕಾರ್ಯಚಟುವಟಿಕೆಗಳಿಗೆ ಹುಬ್ಬಳ್ಳಿ ಯಾಗಿದೆಂದು ಸಚಿವ ಸಿ.ಟಿ. ರವಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈ ಹಿಂದಿನಿಂದಲೂ ಭಯೋತ್ಪಾದಕರ ಅಡಗುತಾಣಗಳಾಗಿ ಅವರ ಕಾರ್ಯಚಟುವಟಿಕೆಗಳಿಗೆ ನೆಲೆಯಾಗಿದೆ. ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣ ವಾಣಿಜ್ಯ ನಗರದಲ್ಲಿ ಸ್ಲೀಪರ್ ಸೆಲ್ಗಳು ಇದ್ದಾರೆ ಎನ್ನುವುದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದರು. ತಿವಾರಿ ಹತ್ಯೆ ಪ್ರಕರಣ ಸಂಬಂಧ ಮಹ್ಮದ್ ಸಾದಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅವನನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಬೇಕು. ಅಲ್ಲದೇ, ಅವರ ಸಕ್ರಿಯ ಕಾರ್ಯಚಟುವಟಿಕೆಗಳ ಜಾಲವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos