ನವದೆಹಲಿ, ಆ. 29 : ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದತಿ ಹಿನ್ನಲೆ ಭಾರತದೊಳಗೆ ಉಗ್ರರನ್ನು ನಸುಳಿಸಿ ಹಿಂಸಾಚಾರ ನಡೆಸಲು ಸಜ್ಜಾಗಿದೆ ಎಂದು ಮೂಲ ತಿಳಿಸಿವೆ.
ಹಿಂದೂಗಳ ಪವಿತ್ರ ಕ್ಷೇತ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ಭಾರಿ ಪ್ರಮಾಣದ ದಾಳಿಗೆ ಲಷ್ಕರೆ ತಯ್ಬಾ ಉಗ್ರರು ಸಂಚು ರೂಪಿಸಿದ್ದಾರೆ. ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ರವಾನಿಸಿದೆ.
ಈಗಾಗಲೇ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ನಿರ್ದೇಶನದ ಮೇರೆಗೆ ಲಷ್ಕರೆ ತಯ್ಬಾ ಉಗ್ರರು ವಾರಾಣಸಿ ಪ್ರವೇಶಿಸಿದ್ದಾರೆ. ಸ್ಥಳೀಯ ಮುಸ್ಲಿಂ ಯುವಕರನ್ನು ಪ್ರಚೋದಿಸಿ ಜಾಲ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದಾರೆ.