ಕೊಪ್ಪಳ, ಜು.09: ಜಿಂದಾಲ್ ಕಾರ್ಖಾನೆಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ತಾಲೂಕಿನ ಮುನಿರಾಬಾದಿನ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನಗಳನ್ನು ತಡೆದು ಪ್ರತಿಭನೆ ಮಾಡಲಾಯಿತು. ಜಿಂದಾಲ್ ಕಂಪನಿಯಿಂದ ಉಂಟಾಗುವ ಪರಿಸರ ಮಾಲಿನ್ಯದಿಂದ ಸುತ್ತಲಿನ ಗ್ರಾಮ ಹಾಗೂ ನಗರಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಾಜ್ಯ ಸರಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಕಡಿಮೆ ಬೆಲೆಗೆ ವಿತರಿಸಿದೆ. 1.22 ಲಕ್ಷ ರೂ. ಗೆ ಎಕರೆ ಜಮೀನು ನೀಡುವ ಉದ್ದೇಶದ ಹಿಂದೆ ಬೇರೊಂದು ಕೈವಾಡವಿದೆ ಎಂದು ಅರೋಪಿಸಿದ್ದಾರೆ. ಜಿಂದಾಲ್ ಕಂಪನಿಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಹೆದ್ದಾರಿಯಲ್ಲಿ ವಾಹನಗಳನ್ನು ಕೆಲ ಹೊತ್ತು ಸಂಚಾರ ತಡೆ ಯಲಾಗಿತ್ತು. ನಂತರ ಸ್ಥಳಕ್ಕೆ ಆಗಮಿಸಿದ ಪೋಲಿಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿ ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.