ವಯನಾಡ್, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಹುಲ್ ಗಾಂಧಿ ಅವರು ಕೇರಳದ ವಯನಾಡಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಏ.4ರಂದು ಸಂಜೆ ಕೋಞಕೊಡೆಗೆ ಆಗಮಿಸಿರುವ ರಾಹುಲ್ ಗಾಂಧಿ, ಇಂದು ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ನಂತರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರಸಲ್ಲಿಕೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಮುಖಂಡರಾದ ರಮೇಶ್ ಚೆನ್ನಿತಾಲ, ಮುಕುಲ್ ವಾಸ್ನಿಕ್, ಕೆಸಿ ವೇಣುಗೋಪಾಲ್, ಓಮನ್ ಚಾಂಡಿ, ಮುಳ್ಳಪಲ್ಲಿ ರಾಮಚಂದ್ರನ್ ಮುಂತಾದವರು ಜೊತೆಯಾಗಲಿದ್ದಾರೆ.