ಬೆಂಗಳೂರು: ಬೆಂಗಳೂರಿನ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು ವೇಗವಾಗಿ ಬಂದ ಬಸ್ ಪಾದಾಚಾರಿಗೆ ಡಿಕ್ಕಿ ಹೊಡೆದು ಅವರು ಮತಪಟ್ಟಿದ್ದಾರೆ.
ಬಸ್ ಡಿಕ್ಕಿಯಾಗಿ ಚೇತನ್ 35 ವರ್ಷದ ಎಂಬ ಯುವಕ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದ ಚೈತನ್ ರಸ್ತೆ ದಾಡುತ್ತಿರುವ ಈ ವೇಳೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ ಗಂಭೀರವಾಗಿ ಗಾಯಗೊಂಡ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.
ಯುವಕ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಬಸ್ ಚಾಲಕ ಶಿವಕುಮಾರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.