ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗೆ ಮತ್ತೊಂದು ಬಲಿಯಾಗಿದೆ. ಕಾಫಿ ತೋಟಕ್ಕೆ ತೆರಳಿದ್ದ ಕಾರ್ಮಿಕ 45 ವರ್ಷದ ವಸಂತ್ ಬಲಿಯಾಗಿದ್ದಾರೆ. ಬೇಲೂರು ತಾಲೂಕು ಮತ್ತಾವರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದು ಗಂಟೆಗಳು ಕಳೆದರು ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳು. ಸ್ಥಳಕ್ಕೆ ಅರಣ್ಯಾಧಿಕಾರಿ ಬರುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ. ಆದರೂ ಯಾವುದೇ ಅಧಿಕಾರಿಗಳೂ ಸಹ ಕೂಡ ಅಲ್ಲಿಗೆ ಹೋಗಿ ನೋಡ್ತಾ ಇಲ್ಲ. ಹಾಸನ ಜಿಲ್ಲೆಯಲ್ಲಿ ಹೆಚ್ಚು ಕಾಡಾನೆ ದಾಳಿಗೆ ಮನುಷ್ಯರು ಬಲಿಯಾಗಿದ್ದಾರೆ. ಆದರೂ ಕೂಡ ಅರಣ್ಯ ಅಧಿಕಾರಿಗಳು ಎಚ್ಚರಿಕೆವಹಿಸಿಲ್ಲಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ .