ವಿಧಾನಸೌಧ ಸುತ್ತಲು ಪೊಲೀಸ್ ಸರ್ಪಗಾವಲು

ವಿಧಾನಸೌಧ ಸುತ್ತಲು ಪೊಲೀಸ್ ಸರ್ಪಗಾವಲು

ಬೆಂಗಳೂರು, ಜು.11 : ಶಾಸಕರ ರಾಜೀನಾಮೆ ಬೆನ್ನಲ್ಲೇ ರಾಜ್ಯದ ಸಮ್ಮಿಶ್ರ ಸರ್ಕಾರದ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಮಿಷನರ್ ಅಲೋಕ್ ಕುಮಾರ್ ಅವರು ಇಂದಿನಿಂದ ಜುಲೈ 14 ರ ವರೆಗೆ ಸೆಕ್ಷನ್ 144 ಜಾರಿ ಮಾಡಿ ದ್ದಾರೆ.ಶಕ್ತಿಸೌಧದಲ್ಲಿ ಇಂದು ಬೆಳಗ್ಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸ್ ರನ್ನು ವಿಧಾನಸೌಧದ ಸುತ್ತ ಭದ್ರತೆಗೆ ನಿಯೋಜಿಸಲಾಗಿದೆ. ಹಲವು ಪೊಲೀಸರು ಮಫ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos