ರಾಯಚೂರು,ಆ. 22 : ಆಂಧ್ರದ ಗುಡೂರು ಠಾಣೆ ವ್ಯಾಪ್ತಿಯ ತುಂಗಭದ್ರಾ ನದಿಯಲ್ಲಿ ಯುವತಿ ಶವಪತ್ತೆಯಾಗಿದೆ. ಅರೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದ ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತಾಲೂಕಿನ ಗಣಮೂರು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿ. ಆ.16ರಂದು ಕಾಣೆಯಾಗಿ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಗುಡೂರು ಸಮೀಪದ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ನಗರದ ನವೋದಯ ಕಾಲೇಜಿನಲ್ಲಿ ಅರೆ ವೈದ್ಯಕೀಯ ಕೋರ್ಸ್ ಓದುತ್ತಿದ್ದ ವಿದ್ಯಾರ್ಥಿನಿ ಗಣಮೂರಿನಿಂದ ಓಡಾಡುತ್ತಿದ್ದಳು. ಆ.16ರಂದು ಕಾಲೇಜಿಗೆ ಬಂದು ಮರಳಿ ಊರಿಗೆ ಹೋಗದೇ ಸ್ಥಳೀಯ ಬಸ್ ನಿಲ್ದಾಣದಿಂದ ಅಪಹರಣಗೊಂಡಿದ್ದಾಳೆ ಎಂದು ವಿದ್ಯಾರ್ಥಿನಿ ತಂದೆ ಈರಣ್ಣ ಮಹಿಳಾ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.