ಪರಂಗೆ ಹಳ್ಳಿಹಕ್ಕಿ ಟಾಂಗ್

ಪರಂಗೆ ಹಳ್ಳಿಹಕ್ಕಿ ಟಾಂಗ್

ಮೈಸೂರು, ನ. 26 : ಜೋಡೆತ್ತುಗಳು ಕಿತ್ತುಕೊಂಡು ಹೋಗಿ ತಿಂಗಳಾಗಿವೆ ಒಂದು ಏರಿಗೆ ಎಳೆದರೆ ಮತ್ತೊಂದು ನೀರಿಗೆ ಎಳೆಯುತ್ತಿದೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಗೆ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ವಿಶ್ವನಾಥ್ ಟಾಂಗ್ ನೀಡಿದ್ದಾರೆ.
ಇಂದು ಹುಣಸೂರಿನಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಜೋಡೆತ್ತಿನ ರೀತಿ ಕೆಲಸ ಮಾಡಿದ್ದೇವೆ ಎಂಬ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಜೋಡೆತ್ತುಗಳು ಕಿತ್ತುಕೊಂಡು ಹೋಗಿ ತಿಂಗಳಾಗಿವೆ. ಪರಮೇಶ್ವರ್ ಗೆ ಕಾಂಗ್ರೆಸ್ ಮಾಡಿದ ಅಪಮಾನಕ್ಕೆ ಅವರು ಚುನಾವಣಾ ಪ್ರಚಾರಕ್ಕೆ ಬರಬಾರದು. ಅವರ ಕಪಾಳಕ್ಕೆ ಹೊಡೆದಂತೆ ಗೃಹ ಖಾತೆ ಕಿತ್ತುಕೊಳ್ಳಲಾಗಿತ್ತು. ಇಷ್ಟಾದರೂ ಯಾವ ಮುಖ ಇಟ್ಟುಕೊಂಡು ಪ್ರಚಾರಕ್ಕೆ ಬಂದಿದ್ದಾರೋ ಗೊತ್ತಿಲ್ಲ ಎಂದು ಪರಮೇಶ್ವರ್ ವಿರುದ್ಧ ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos