ವಿನಯ್ ಕುಲಕರ್ಣಿಗೆ ಸುಪ್ರೀಂ ಜಾಮೀನು

  • In State
  • August 11, 2021
  • 173 Views
ವಿನಯ್ ಕುಲಕರ್ಣಿಗೆ ಸುಪ್ರೀಂ ಜಾಮೀನು

ನವದೆಹಲಿ : ಯೋಗೇಶ್ ಗೌಡ ಕೊಲೆ ಪ್ರಕರಣ ಹಿನ್ನೆಲೆ, ಧಾರವಾಡಕ್ಕೆ ಭೇಟಿ ನೀಡದಿರುವಂತೆ ಸೇರಿ ವಿವಿಧ ಷರತ್ತುಗಳನ್ನು ವಿಧಿಸಿ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಸಿಬಿಐನಿಂದ ಕಳೆದ ವರ್ಷ ನ. 5,ರಂದು ಬಂಧನಕ್ಕೆ ಒಳಗಾಗಿದ್ದು. ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಅಜಯ್ ರಸ್ತೋಗಿ ಅವರಿದ್ದ ಪೀಠ ಜಾಮೀನು ನೀಡಿದೆ. ಸಿಬಿಐ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos