ಚಿಕ್ಕಬಳ್ಳಾಪುರ, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ಸಂಸದ ವೀರಪ್ಪ ಮೊಯ್ಲಿ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಚುನಾವಣಾ ಅಧಿಕಾರಿಗಳು ಚುನಾವಣಾ ಪ್ರಚಾರಕ್ಕೆ ಮೂರು ವಾಹನಗಳಿಗೆ ಮಾತ್ರ ಅನುಮತಿ ನೀಡಿ ಪತ್ರ ಬರೆದಿತ್ತು. ಆದರೆ ಸಂಸದ ವೀರಪ್ಪ ಮೊಯ್ಲಿ ಅವರು ಮೂರು ಕಾರಿಗೆ ಅನುಮತಿ ಪಡೆದು ಮೂವತ್ತು ವಾಹನಗಳಲ್ಲಿ ಪ್ರಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ವೀರಪ್ಪ ಮೊಯ್ಲಿ ಅವರು ಇಂದು ನಾಮಪತ್ರ ಸಲ್ಲಿಸುವ ಮುನ್ನ, ಚಿಕ್ಕಬಳ್ಳಾಪುರ ತಾಲೂಕಿನ ನಂದಿಯಲ್ಲಿರುವ ಭೋಗನಂದಿಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವೀರಪ್ಪ ಮೊಯ್ಲಿಗೆ ಸಚಿವ ಎಂಟಿಬಿ ನಾಗರಾಜ್, ಶಿವಶಂಕರ್ ರೆಡ್ಡಿ, ಶಾಸಕ ಸುಧಾಕರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದಾರೆ.