ಯಲ್ಲಾಪುರ: ತಾಲೂಕು ಆರೋಗ್ಯ ಕೇಂದ್ರಕ್ಕೆ ಶಿರಸಿಯ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಕಾರ್ಯ ಆರಂಭವಾಗಿರುವ ಆಮ್ಲಜನಕ ಘಟಕವನ್ನು ಪರಿಶೀಲಿಸಿದರು.
ಪಟ್ಟಣದ ಕಾಳಮ್ಮ ನಗರದಲ್ಲಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳ ವಸತಿನಿಲಯದಲ್ಲಿ ಆರಂಭಿಸಲಾದ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಬೆಡ್ ವ್ವವಸ್ಥೆ ಕಲ್ಪಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ, ಪೋಲಿಸ್ ನಿರೀಕ್ಷಕ ಸುರೇಶ ಯಳ್ಳೂರ, ಪ.ಪಂ ಮುಖ್ಯಾದಿಕಾರಿ ಅರುಣ ನಾಯ್ಕ, ಆರೋಗ್ಯ ನಿರೀಕ್ಷಕ ಗುರು ಗಡಗಿ, ಮುಂತಾದವರು ಇದ್ದರು.