ವಿವಾದಾತ್ಮಕ ಹೇಳಿಕೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಅನಂತ ಕುಮಾರ್ ಹೆಗ್ಡೆ

ವಿವಾದಾತ್ಮಕ ಹೇಳಿಕೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಅನಂತ ಕುಮಾರ್ ಹೆಗ್ಡೆ

ಬೆಂಗಳೂರು, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಅನ್ಯಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತ್​ ಕುಮಾರ್ ಹೆಗ್ಡೆ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಇಂದು ಹಾಜರಾದರು.

ಪ್ರವಾಸಿ ಮಂದಿರವೊಂದರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಟ್ಕಳ ಹಾಗೂ ಅಜಂಘಡ ಭಯೋತ್ಪಾದಕರ ಉತ್ಪಾದನಾ ಕೇಂದ್ರ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಅನಂತ್ ಕುಮಾರ್ ಹೆಗಡೆ ವಿರುದ್ದ ಸಿರಸಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಆರಂಭವಾದ ಹಿನ್ನೆಲೆ ಕೋರ್ಟ್​ಗೆ ಖುದ್ದು ಅನಂತ್ ಕುಮಾರ್ ಹೆಗಡೆ ಬಂದಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ‌ ವಿಚಾರಣೆಯನ್ನು ಮುಂದೂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos