ಬೆಂಗಳೂರು: ‘ಲವ್ ಯೂ ರಚ್ಚು’ ಚಿತ್ರೀಕರಣದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವಿವೇಕ್ ಅವರ ಚಿಕ್ಕಪ್ಪ ಗೋಪಿ ರವರಿಗೆ ನಿರ್ದೇಶಕರು ಮಂಗಳವಾರ ದೂರವಾಣಿ ಕರೆ ಮಾಡಿ ಹತ್ತು ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿವೇಕ್ ಮೃತದೇಹದ ಅಂತ್ಯಸಂಸ್ಕಾರವನ್ನು ಬೆಂಗಳೂರಿನ ಹಳೇಗುಡ್ಡದಲ್ಲಿ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ.