ಏರ್ ಸ್ಟ್ರೈಕ್ ನಿಂದ ಬಿಜೆಪಿಗೆ ಲಾಭ ಹೇಳಿಕೆ: ಬಿಎಸ್ ವೈ ವಿರುದ್ಧ ಕೇಂದ್ರ ಸಚಿವ ವಿ.ಕೆ.ಸಿಂಗ್ ಆಕ್ರೋಶ

ಏರ್ ಸ್ಟ್ರೈಕ್ ನಿಂದ ಬಿಜೆಪಿಗೆ ಲಾಭ ಹೇಳಿಕೆ: ಬಿಎಸ್ ವೈ ವಿರುದ್ಧ ಕೇಂದ್ರ ಸಚಿವ ವಿ.ಕೆ.ಸಿಂಗ್ ಆಕ್ರೋಶ

ಬೆಂಗಳೂರು, ಫೆ.28, ನ್ಯೂಸ್‍ ಎಕ್ಸ್ ಪ್ರೆಸ್: ಪಾಕ್ ಮೇಲಿನ ವಾಯುಸೇನೆಯ ದಾಳಿಯಿಂದ ಬಿಜೆಪಿ 22 ಸ್ಥಾನ ಗೆಲ್ಲಲಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕ ಹಾಗೂ ನಿವೃತ್ತ ಸೇನಾ ಜನರಲ್ ವಿಜಯ್ ಕುಮಾರ್ ಸಿಂಗ್ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯ್ ಕುಮಾರ್ ಸಿಂಗ್, ಬಿಎಸ್ ವೈ ಹೇಳಿಕೆಗೆ ಸಂಬಂಧಿಸಿದಂತೆ ನಾನು ಭಿನ್ನವಾಗಿರಲು ಕೋರುತ್ತೇನೆ. ನಾವು ಒಂದು ರಾಷ್ಟ್ರವಾಗಿ ನಿಲ್ಲುತ್ತೇವೆ. ನಮ್ಮ ಸರ್ಕಾರವು ತೆಗೆದುಕೊಳ್ಳುವ ಕ್ರಮವು ನಮ್ಮ ರಾಷ್ಟ್ರವನ್ನು ಕಾಪಾಡಿಕೊಳ್ಳುವುದು ಮತ್ತು ನಮ್ಮ ನಾಗರೀಕರ ಸುರಕ್ಷತೆಯನ್ನು ಖಚಿತಪಡಿಸುವುದಕ್ಕಾಗಿಯೇ ಹೊರತು ಕೆಲವು ಹೆಚ್ಚುವರಿ ಸ್ಥಾನಗಳನ್ನು ಗೆಲ್ಲುವುದಕ್ಕೆ ಅಲ್ಲ ಎಂದು ಹೇಳಿದ್ದಾರೆ.

ಇನ್ನು ಬಿಎಸ್ ವೈ ಅವರ ಹೇಳಿಕೆಗೆ ರಾಜಕೀಯ ಹಾಗೂ ಇತರೆ ವಲಯಗಳಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಎಸ್ ವೈ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos