ಜನವರಿ ಅಂತ್ಯದೊಳಗೆ ಸಂಪುಟ ವಿಸ್ತರಣೆ

ಜನವರಿ ಅಂತ್ಯದೊಳಗೆ ಸಂಪುಟ ವಿಸ್ತರಣೆ

ಹೊಳೆನರಸೀಪುರ,ಜ. 27 : ಜನವರಿ ಅಂತ್ಯದೊಳಗೆ ಸಂಪುಟ ವಿಸ್ತರಣೆಯಾಗಲಿದೆ. ತಿಂಗಳಾಂತ್ಯದಲ್ಲಿ ಎಲ್ಲವೂ ಮುಗಿಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.ಹಾಸನ ಸಪ್ತಮಾತೃಕೆ ದೇವಾಲಯ, ರಾಜಗೋಪುರ ಉದ್ಘಾಟನೆ ಹಾಗೂ ಮಡಿಕೇರಿಯಲ್ಲಿ 4000 ಹಾಸಿಗೆಯುಳ್ಳ ಆಸ್ಪತ್ರೆ ಶಂಕುಸ್ಥಾಪನೆಯನ್ನು ನೆರವೇರಿಸಿ ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆ ಗ್ರಾಮಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಯಲಿದೆ ಎಂದರು.
ದಾವೋಸ್ ಭೇಟಿ ತುಂಬ ಉಪಯುಕ್ತವಾಗಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಳಿಕ ಬೇರೆ ಯಾರೂ ಅಲ್ಲಿಗೆ ಹೋಗಿರಲಿಲ್ಲ. ದಾವೋಸ್ಗೆ ಹೋಗಿ 40 ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೇನೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ವಿನಂತಿ ಮಾಡಿದ್ದೇನೆ. ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಭರವಸೆ ಕೊಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos