ಬೆಂಗಳೂರು, ಏ. 19, ನ್ಯೂಸ್ ಎಕ್ಸ್ ಪ್ರೆಸ್: ವೋಟ್ ಹಾಕದ ಸಿಲಿಕಾನ್ ಸಿಟಿ ಜನರು ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು, ಅವರು ಬದುಕಿರುವ ಶವಗಳು ಎಂದು ನಟ ಜಗ್ಗೇಶ್ ಟ್ವೀಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ನಿನ್ನೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 53.47% ಮತದಾನವಾದರೆ, ಬೆಂಗಳೂರು ಉತ್ತರದಲ್ಲಿ ಶೇ. 54.63% ಹಾಗೂ ಬೆಂಗಳೂರು ಕೇಂದ್ರದಲ್ಲಿ ಶೇ. 53.53% ಮತದಾನವಾಗಿದೆ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.