ವಿಜಯಪುರ ಏ. 25, ನ್ಯೂಸ್ ಎಕ್ಸ್ ಪ್ರೆಸ್: ವಿಜಯಪುರ ಲೋಕಸಭೆ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ಡಾ.ಸುನಿತಾ ಚವ್ಹಾಣ ಅವರು, ಜಿಲ್ಲೆಯಲ್ಲಿ ಮತ ಯಂತ್ರಗಳ ಬದಲಾವಣೆ ಮಾಡಿರುವ ಸಂಶಯ ಇರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿ, ಇಂಡಿ ತಾಲೂಕಿನ ಜೇವೂರಿನಲ್ಲಿ ಮತಯಂತ್ರಗಳನ್ನು ಬದಲಿಸಿದ ಸಂಶಯವಿದೆ.
ಮಂಗಳವಾರ ಜೇವೂರ ಗ್ರಾಮದಲ್ಲಿ ಎಂಟರಿಂದ ಹತ್ತು ಜನ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ನಿಂತಿದ್ದರು. ಅವರನ್ನು ವಿಚಾರಿಸಿದಾಗ ಅವರು ಅನುಮಾನಾಸ್ಪದವಾಗಿ ಜಾಗ ಖಾಲಿ ಮಾಡಿದ್ದಾರೆ. ಆ ಭಾಗದಲ್ಲಿ ಜೆಡಿಎಸ್ ಗೆ ಹೆಚ್ಚಿನ ಮತ ಬರುವ ನಿರೀಕ್ಷೆಯಿಂದ ಮತ ಯಂತ್ರಗಳ ಬದಲಾವಣೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಜತೆಗೆ, ಈ ಕುರಿತು ಚುನಾವಣಾಧಿಕಾರಿಗಳಿಗೆ ತನಿಖೆ ನಡೆಸುವಂತೆ ದೂರಿನಲ್ಲಿ ಕೋರುತ್ತೇನೆ ಎಂದರು.