ದಾವಣಗೆರೆ, ಅ. 8 : ದಾವಣಗೆರೆಯಲ್ಲಿ ಯುವಕರ ಗುಂಪೊಂದು ವ್ಯಾಪಾರ ಮಾಡುತ್ತಿದ್ದ ವೃದ್ಧನ ದರ್ಪ ತೋರಿಸಿ ಹಣ ಒಸಲಿ ಮಾಡುತ್ತಿರುವ ಘಟನೆ ನಡೆದಿದೆ.
ಜಕಾತಿ ಹಣ ನೀಡದ ಹಿನ್ನಲೆ ಯುವಕರು ದರ್ಪ ಮೆರೆದ್ದು, ನಗರದ ಕೆ.ಆರ್ ಮಾರುಕಟ್ಟೆ ಸೇರಿವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಹಾಗೂ ರೈತರು ತಮ್ಮ ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ಮಾರಾಟ ಮಾಡಲು ಬಂದಿರುತ್ತಾರೆ. ಅಂತವರ ಬಳಿ ಪಾಲಿಕೆ ವತಿಯಿಂದ ನೆಲದ ಶುಲ್ಕವನ್ನು ಪಡೆಯಲು ಟೆಂಡರ್ ಪಡೆದಿರುತ್ತಾರೆ. ಆದರೆ ಕೆಲ ಟೆಂಡರ್ ದಾರರು ವ್ಯಾಪಾರಸ್ಥರ ಹಾಗೂ ರೈತರ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಯುವಕರ ಗುಂಪೊಂದು ವ್ಯಾಪಾರ ಮಾಡುತ್ತಿದ್ದ ವೃದ್ಧನೊಬ್ಬನ ಮೇಲೆ ದರ್ಪ ತೋರಿದೆ.