ವೃಂದಾವನ ಧ್ವಂಸ

ವೃಂದಾವನ ಧ್ವಂಸ

ಉಡುಪಿ, ಜು. 18 : ರಾಜ್ಯದ ಹೆಮ್ಮೆಯ ಸಂಕೇತ ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ರಾಜಗುರುಗಳಾಗಿದ್ದ ವ್ಯಾಸರಾಜರ ವೃಂದವನ ರಕ್ಷಣೆ ಸರ್ಕಾರದ ಹೊಣೆ.
ಕೊಪ್ಪಳ ಜಿಲ್ಲೆಯ ಆನೆಗೊಂದಿಯಲ್ಲಿರುವ ನವ ವೃಂದಾವನ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಜಂಟಿಯಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಘವೇಂದ್ರ ಸ್ವಾಮೀಜಿಗಳ ಪೂರ್ವ ಅವತಾರ ವ್ಯಾಸರಾಜರು ದಾಸ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ. ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೇಜಾವರ ಶ್ರೀಗಳು ಮುಂಬೈ ಪ್ರವಾಸದಲ್ಲಿದ್ದು, ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಸಂಜೆಯೊಳಗೆ ಹೊಸಪೇಟೆ ಭೇಟಿ ನೀಡಲಿದ್ದಾರೆ ಪೇಜಾವರ ಮಠದ ಮೂಲದಿಂದ ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos